ಮಂಗಳೂರು : ವಿದ್ಯಾರ್ಥಿ ಆತ್ಮಹತ್ಯೆ

Update: 2022-06-16 18:09 GMT

ಉಳ್ಳಾಲ : ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಬಗಂಬಿಲದಲ್ಲಿ ಗುರುವಾರ ಸಂಜೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಹರ್ಷದೀಪ್(20) ಎಂದು ಗುರುತಿಸಲಾಗಿದೆ.

ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ‌ ವಿದ್ಯಾರ್ಥಿಯಾಗಿದ್ದ ಈತ ಗುರುವಾರ ಬಗಂಬಿಲದ ಮನೆಗೆ ಬಂದಿದ್ದು, ಮನೆಯಲ್ಲಿ ತಾಯಿ ಮತ್ತು ಮಗ ವಾಸವಾಗಿದ್ದರು. ತಾಯಿಗೆ ತುಂಬಾ ಸಾಲ ಇರುವ ಬಗ್ಗೆ ಅರಿತ ವಿದ್ಯಾರ್ಥಿ ಹರ್ಷದೀಪ್‌ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News