ಬೆಂಗಳೂರು; ಆ್ಯಸಿಡ್ ಸಂತ್ರಸ್ತೆಗೆ ಪೊಲೀಸರಿಂದ ರಕ್ತದಾನ

Update: 2022-06-16 18:19 GMT

ಬೆಂಗಳೂರು, ಜೂ.16: ಆ್ಯಸಿಡ್ ಸಂತ್ರಸ್ತ ಯುವತಿಯ ಚಿಕಿತ್ಸೆಗೆ ರಕ್ತದಾನ ಮಾಡುವ ಮೂಲಕ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸದ್ಯ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಾಗಿರುವ ಯುವತಿಗೆ ಇತ್ತೀಚಿಗೆ ಶಸ್ತ್ರ ಚಿಕಿತ್ಸೆಯಾಗಿದ್ದು, ರಕ್ತದ ಅವಶ್ಯಕತೆ ಇತ್ತು. ಈ ಬಗ್ಗೆ ವಿಷಯ ತಿಳಿದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಐದು ಯೂನಿಟ್ ರಕ್ತದಾನ ಮಾಡಿದ್ದಾರೆ. 

ಎ.28ರಂದು ಸುಂಕದಕಟ್ಟೆಯ ಮುತ್ತೂಟ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸಮೀಪ ಯುವತಿಯ ಮೇಲೆ ದುಷ್ಕರ್ಮಿ ಆ್ಯಸಿಡ್ ದಾಳಿ ನಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News