ಧಾರವಾಡ: ಭಾರೀ ಮಳೆಯಿಂದಾಗಿ ಶಾಲೆಯಲ್ಲೇ ಸಿಲುಕಿದ್ದ 150 ವಿದ್ಯಾರ್ಥಿಗಳ ರಕ್ಷಣೆ

Update: 2022-06-17 13:58 GMT
(Photo: Screengrab)

ಧಾರವಾಡ: ಭಾರೀ ಮಳೆಯಿಂದಾಗಿ ಇಲ್ಲಿನ ಅಮರಗೋಳ ಗ್ರಾಮದ ಪ್ರೌಢಶಾಲೆಯೊಂದರಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. 

ಬೆಳವಟಗಿ ಪಂಚಾಯತ್ ವ್ಯಾಪ್ತಿಯ ಅಮರಗೋಳ ಗ್ರಾಮದ ಶಾಲೆಯಲ್ಲಿ ಭಾರೀ ಮಳೆಯಿಂದಾಗಿ ಗುರುವಾರ ಸಂಜೆ ಸುಮಾರು 150 ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು. ರಾತ್ರಿ ನೀರಿನ ಮಟ್ಟ ಕಡಿಮೆಯಾದ ಬಳಿಕ ಟ್ರ್ಯಾಕ್ಟರ್ ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು  ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. 

ಶಾಲಾ ಕಟ್ಟಡದೊಳಗೆ ಸಿಲುಕಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಪಂಚಾಯತ್ ಅಧಿಕಾರಿಗಳು ಮತ್ತು ಸ್ಥಳೀಯರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. 

ನಿನ್ನೆ (ಗುರುವಾರ) ಮಧ್ಯಾಹ್ನ ಅಮರಗೋಳ ಗ್ರಾಮದಲ್ಲಿ ಸುರಿದ ಭಾರೀ ಮಳೆಯಿಂದ ಹಳ್ಳಗಳು ಮಳೆಯಿಂದ ತುಂಬಿ ಹರಿಯುತ್ತಿದ್ದು, ನೀರಿನ ಹರಿವು ಹೆಚ್ಚಿದ ಪರಿಣಾಮ ಸರ್ಕಾರಿ ಪ್ರೌಢ ಶಾಲೆಯ ಸುತ್ತ ನೀರು ಆವರಿಸಿತ್ತು ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News