ಅಗ್ನಿಪಥ್ ಯೋಜನೆಗೆ ವಿರೋಧ; ಧಾರವಾಡದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಯುವಕರು ಪೊಲೀಸ್ ವಶಕ್ಕೆ

Update: 2022-06-18 07:48 GMT
ಸಾಂದರ್ಭಿಕ ಚಿತ್ರ

ಧಾರವಾಡ:  ಹೊಸ ಸೇನಾ ನೇಮಕಾತಿ ನೀತಿ 'ಅಗ್ನಿಪಥ್‌' ವಿರುದ್ಧ ಹಲವು ರಾಜ್ಯಗಳಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಧಾರವಾಡದಲ್ಲಿ ತಿಭಟನೆಗೆ ಮುಂದಾಗಿದ್ದ 20ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 

ಶನಿವಾರ ಧಾರವಾಡ ನಗರದ ಕಲಾಭವನ ಬಳಿ  ಸೇನಾ ಆಕಾಂಕ್ಷಿಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು  ಯುವಕರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಅಗ್ನಿಪಥ ಯೋಜನೆಯ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟ (ಎಐಎಸ್ಯು)ದ ಸದಸ್ಯರು ಸೇರಿದಂತೆ ಯುವಜನರ ಗುಂಪೊಂದು ದೇಶಾದ್ಯಂತ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News