ಅಗ್ನಿಪಥ್ ಯೋಜನೆಗೆ ವಿರೋಧ; ಧಾರವಾಡದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಯುವಕರು ಪೊಲೀಸ್ ವಶಕ್ಕೆ
Update: 2022-06-18 07:48 GMT
ಧಾರವಾಡ: ಹೊಸ ಸೇನಾ ನೇಮಕಾತಿ ನೀತಿ 'ಅಗ್ನಿಪಥ್' ವಿರುದ್ಧ ಹಲವು ರಾಜ್ಯಗಳಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಧಾರವಾಡದಲ್ಲಿ ತಿಭಟನೆಗೆ ಮುಂದಾಗಿದ್ದ 20ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶನಿವಾರ ಧಾರವಾಡ ನಗರದ ಕಲಾಭವನ ಬಳಿ ಸೇನಾ ಆಕಾಂಕ್ಷಿಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಅಗ್ನಿಪಥ ಯೋಜನೆಯ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟ (ಎಐಎಸ್ಯು)ದ ಸದಸ್ಯರು ಸೇರಿದಂತೆ ಯುವಜನರ ಗುಂಪೊಂದು ದೇಶಾದ್ಯಂತ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.