ಸುಳ್ಯ : ತರಗತಿ ನಡೆಸುತ್ತಿರುವ ವೇಳೆ ಹೃದಯಾಘಾತಕ್ಕೊಳಗಾಗಿ ಮುಸ್ಲಿಯಾರ್ ನಿಧನ
Update: 2022-06-18 10:39 GMT
ಸುಳ್ಯ : ಬೆಳ್ಳಾರೆ ತಂಬಿನಮಕ್ಕಿ ನಿವಾಸಿ ರಶೀದ್ ಮುಸ್ಲಿಯಾರ್ (51) ಅವರು ಇಂದು ಬೆಳಗ್ಗೆ ಮದರಸ ತರಗತಿ ನಡೆಸುತ್ತಿರುವ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಮನೆಯಿಂದ ಕಳಂಜ ಮಸೀದಿಗೆ ತೆರಳಿದ್ದ ಅವರು ಬೆಳಗ್ಗೆ 7.30ಕ್ಕೆ ಮದರಸ ತರಗತಿ ನಡೆಸುತ್ತಿರುವ ಸಂದರ್ಭ ಹೃದಯಾಘಾತದಿಂದ ಕುಸಿದು ಬಿದ್ದರು. ಕೂಡಲೇ ಅವರನ್ನು ಪುತ್ತೂರಿನ ಅಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.