ಕುಮಟಾ : ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

Update: 2022-06-18 12:43 GMT

ಕುಮಟಾ : ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣ ಮನನೊಂದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ವರದಿಯಾಗಿದೆ.

ತಾಲೂಕಿನ ಹೊಲನಗದ್ದೆ ಕಡ್ಲೆ ನಿವಾಸಿ ಪ್ರಣಮ್ ಈಶ್ವರ ನಾಯ್ಕ (18) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಇಂದು ಪ್ರಕಟವಾದ ಪಿಯುಸಿ ಫಲಿತಾಂಶದಲ್ಲಿ ಪ್ರಣವ್ ಫೇಲ್ ಆಗಿದ್ದು, ಇದರಿಂದ ನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಲಾಗಿದೆ. ತಂದೆ ಆಟೋ ಚಾಲಕನಾಗಿದ್ದು, ಒಬ್ಬನೇ ಮಗನಾದ ಈತನನ್ನು ಬಹಳ ಪ್ರೀತಿಯಿಂದ ಬೆಳೆಸಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News