​ಸುಳ್ಯ; ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಇಸ್ಮಾಯೀಲ್ ಪಡ್ಪಿನಂಗಡಿ

Update: 2022-06-20 12:05 GMT

ಸುಳ್ಯ, ಜೂ.20: ಸುಳ್ಯ ತಾಲೂಕು ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಇಸ್ಮಾಯೀಲ್ ಪಡ್ಪಿನಂಗಡಿಯವರನ್ನು ನೇಮಿಸಲಾಗಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ತಿಳಿಸಿದ್ದಾರೆ.

ಪಕ್ಷದ ಶಿಸ್ತು ಉಲ್ಲಂಘಿಸಿದ್ದಲ್ಲದೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಮಾತಿಗೆ ಗೌರವ ನೀಡದೆ ಪಕ್ಷದ ಹಿತಕ್ಕೆ ವಿರುದ್ಧವಾಗಿ ಈ ಹಿಂದೆ ಅಲ್ಪಸಂಖ್ಯಾತರ ಅಧ್ಯಕ್ಷರಾಗಿದ್ದ ಸಂಪಾಜೆ ಜಿ.ಕೆ. ಹಮೀದ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಅಲ್ಲದೆ ಬೇರೆ ಅಧ್ಯಕ್ಷರನ್ನು ನೇಮಿಸುವಂತೆ ಬ್ಲಾಕ್ ಅಧ್ಯಕ್ಷರಿಂದ ನನಗೆ ಶಿಫಾರಸು ಬಂದಿದೆ ಎಂದು ಶಾಹುಲ್ ಹಮೀದ್ ತಿಳಿಸಿದ್ದಾರೆ.

ನಾನು ಸುಳ್ಯ ಕ್ಷೇತ್ರದ ಕಾಂಗ್ರೆಸ್ ನಾಯಕರು ಹಾಗೂ ಅಲ್ಪಸಂಖ್ಯಾತರ ಪ್ರಮುಖರೊಂದಿಗೆ ಸಮಾಲೋಚಿಸಿದ್ದು, ಅವರೆಲ್ಲರ ಅಭಿಪ್ರಾಯದಂತೆ ಹಮೀದ್‌ರನ್ನು ವಜಾಗೊಳಿಸಿ ಇಸ್ಮಾಯೀಲ್ ಪಡ್ಪಿನಂಗಡಿಯವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡಿದ್ದೇನೆ ಎಂದು ಶಾಹುಲ್ ಹಮೀದ್ ಹೇಳಿದ್ದಾರೆ.

ಇಸ್ಮಾಯೀಲ್ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಪಾಧ್ಯಕ್ಷ, ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ಸಂಘಟನಾ ಕಾರ್ಯದರ್ಶಿ, ರಹ್ಮಾನೀಯ ಕೇಂದ್ರ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್‌ನ ಅಧ್ಯಕ್ಷ, ದ.ಕ. ಜಿಲ್ಲಾ ಸುನ್ನಿ ಮ್ಯಾನೇಜ್‌ಮೆಂಟ್ ಅಸೋಸಿಯೇಶನ್‌ನ ಉಪಾಧ್ಯಕ್ಷ, ಸುನ್ನಿ ಸೆಂಟ‌ರ್ ಬೆಳ್ಳಾರೆ ಇದರ ಅಧ್ಯಕ್ಷ, ಅಲ್ಪಸಂಖ್ಯಾತ ವಿವಿದೋದ್ದೇಶ ಸಹಕಾರ ಸಂಘ ನಿರ್ದೇಶಕ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯ ತಾಲೂಕು ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News