ಈ.ಡಿ. ಕಿರುಕುಳ ಆರೋಪ: ಹೊಸದಿಲ್ಲಿಯಲ್ಲಿ ಕೆಪಿಸಿಸಿಯಿಂದ ಪ್ರತಿಭಟನೆ

Update: 2022-06-21 08:22 GMT

ಹೊಸದಿಲ್ಲಿ, ಜೂ.21: ಕೇಂದ್ರ ಸರಕಾರವು ಇ.ಡಿ. ಮೂಲಕ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ಪೂರ್ವಾಧ್ಯಕ್ಷ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೊಸದಿಲ್ಲಿಯಲ್ಲಿರುವ ಎಐಸಿಸಿ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸಂಸದ ಡಿ.ಕೆ.ಸುರೇಶ್, ರಾಜ್ಯಸಭೆ ಸದಸ್ಯರಾದ ಜಿ.ಸಿ. ಚಂದ್ರಶೇಖರ್, ಎಲ್. ಹನುಮಂತಯ್ಯ, ಮುಖಂಡರಾದ ನಾಗರಾಜ್ ಛಬ್ಬಿ, ವಿನಯ್ ಕಾರ್ತಿಕ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News