ನಿಟ್ಟೆ ರೈತ ಉತ್ಪಾದಕ ಸಂಸ್ಥೆಯ ವ್ಯಾಪಾರ ಮಳಿಗೆಯ ಪ್ರಾರಂಭ

Update: 2022-06-21 11:44 GMT

ನಿಟ್ಟೆ: ನಿಟ್ಟೆ ರೈತ ಉತ್ಪಾದಕ ಸಂಸ್ಥೆಯ ವ್ಯಾಪಾರ ಮಳಿಗೆಯ ಕಾರ್ಕಳ ಪಡುಬಿದ್ರೆ ಮುಖ್ಯರಸ್ತೆಯ ಹಾಲೆಕಟ್ಟೆ ಕಲ್ಯಾದ  ಸುರಕ್ಷ ಸಂಕಿರಣದಲ್ಲಿ ಇತ್ತೀಚೆಗೆ ಆರಂಭಗೊಂಡಿತು. 

ನಿಟ್ಟೆ ಆಸುಪಾಸಿನ ಗ್ರಾಮದ ಎಲ್ಲಾ ರೈತರ ಸಮೂಹ ಇದಾಗಿದ್ದು ರೈತರಿಗೆ ಕೃಷಿಗೆ ಬೇಕಾದ ಎಲ್ಲಾ ಸಾಮಗ್ರಿಗಳು ಹಾಗೂ ಸೇವಾ ಸೌಲಭ್ಯ ಲಭ್ಯವಿರುತ್ತದೆ. 

ಕಾರ್ಯಕ್ರಮದಲ್ಲಿ ನಿಟ್ಟೆ ರೈತ ಉತ್ಪಾದಕ ಸಂಸ್ಥೆ ಯ ಚೇರ್ ಮ್ಯಾನ್ ಅಶೋಕ್ ಅಡ್ಯಂತಾಯ ಹಾಗೂ ನಿಟ್ಟೆ ಸಂಸ್ಥೆಯ  ಅಟಲ್ ಇಂಕ್ಯೂಬೇಶನ್ ಸೆಂಟರ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ. ಎ.ಪಿ. ಆಚಾರ್ಯ,  ಇಂಕ್ಯೂಬೇಶನ್ ಮ್ಯಾನೇಜರ್ ಪುನೀತ ರೈ, ನಿಟ್ಟೆ ರೈತ ಉತ್ಪಾದಕ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ವಿಜಯ್ ಶೆಟ್ಟಿ, ಸಂಸ್ಥೆಯ ನಿರ್ದೇಶಕರುಗಳಾದ ಯೋಗೀಶ್ ಹೆಗ್ಡೆ,  ಶಂಕರ್ ಕುಂದರ್, ವಿಕೆ ಭಟ್, ಗಜಾನನ ಶೆಟ್ಟಿ, ಸುರೇಶ್ ಮೂಲ್ಯ ಹಾಗೂ ಎಐಸಿ ನಿಟ್ಟೆಯ  ಪ್ರವೀಣ್ ಜಾಧವ್, ದೀಕ್ಷಾ ರೈ, ದೀಕ್ಷಾ ಶೆಟ್ಟಿ, ಅಶೋಕ್ ಸಾಲಿಯಾನ್ ಭಾಗವಹಿಸದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News