ಮನೆಗೆ ನುಗ್ಗಿ ನಗ-ನಗದು ಕಳವು ಪ್ರಕರಣ: ಆರೋಪಿಯ ಬಂಧನ

Update: 2022-06-21 15:32 GMT

ಕುಂದಾಪುರ: ಕಮಲಶಿಲೆ ಗ್ರಾಮದ ಹಳ್ಳಿಹೊಳೆಯ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಬೈಂದೂರು ಉಪ್ಪುಂದದ ಶ್ರೀಧರ ಮಡಿವಾಳ (38) ಬಂಧಿತ ಆರೋಪಿ.  ಈತ ಜೂ.18ರಂದು ರಾತ್ರಿ ರಾಘವೇಂದ್ರ ಯಡಿಯಾಳ ಎಂಬವರ ಮನೆಯ ಕೋಣೆಯಲ್ಲಿ ಇರಿಸಿದ್ದ 3.05ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ ಕಳವು ಮಾಡಿದ 2 ಚಿನ್ನದ  ಬಳೆಗಳು, 1 ಮಲ್ಲಿಗೆ ಮಿಟ್ಟಿಯ ಚಿನ್ನದ ಸರ, ಹಾಗೂ ಒಂದು ಚಿನ್ನದ ಉಂಗುರ ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News