ಮೈಸೂರು: ರಾಜವಂಶಸ್ಥರ ಆಹ್ವಾನದ ಮೇರೆಗೆ ಅರಮನೆಯಲ್ಲಿ ಆತಿಥ್ಯ ಸ್ವೀಕರಿಸಿದ ಪ್ರಧಾನಿ ಮೋದಿ

Update: 2022-06-21 16:26 GMT

ಮೈಸೂರು: ಅಂತಾರಾಷ್ಟ್ರೀಯ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿ ಅರಮನೆ ಆವರಣದಲ್ಲಿ ನಡೆದ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡು ಯೋಗ ಪ್ರದರ್ಶನ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು ಬಳಿಕ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ಆಹ್ವಾನದ ಮೇರೆಗೆ ರಾಜವಂಶಸ್ಥರ ಅಂಬಾವಿಲಾಸ ಅರಮನೆಗೆ ತೆರಳಿ ಆತಿಥ್ಯ ಸ್ವೀಕರಿಸಿದರು.

ರಾಜಮಾತೆಯವರ ಆಹ್ವಾನದ ಮೇರೆಗೆ ಉಪಹಾರಕೂಟದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿಯವರಿಗೆ ದಕ್ಷಿಣಭಾರತ ಶೈಲಿಯ ತರಹೇವಾರಿ ತಿಂಡಿಗಳನ್ನು ಬೆಳ್ಳಿ ತಟ್ಟೆಯಲ್ಲಿ ಬಡಿಸಲಾಯಿತು. ಸ್ಪೆಷಲ್ ಮೈಸೂರು ಪಾಕ್, ಇಡ್ಲಿ ಸಾಂಬಾರ್, ಅವಲಕ್ಕಿ, ಉಪ್ಪಿಟ್ಟು ಕೂಡ ಮೆನುವಿನಲ್ಲಿತ್ತು.

ಪ್ರಧಾನಿಯವರಿಗಾಗಿ ಶುದ್ಧ ಸಸ್ಯಾಹಾರದ ಖಾದ್ಯಗಳನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ನೇತೃತ್ವದಲ್ಲಿ ತಯಾರಿಸಲಾಗಿತ್ತು.

ಅರಮನೆಗೆ ಆಗಮಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.

ಈ ಸಂದರ್ಭ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್,ತ್ರಿಷಿಕಾ ಕುಮಾರಿ ಒಡೆಯರ್, ಆದ್ಯವೀರ ಒಡೆಯರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News