ಜೂ. 26ರಂದು ಸರಕಾರಿ ನೌಕರರ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ

Update: 2022-06-22 16:11 GMT

ಉಡುಪಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಉಡುಪಿ ಜಿಲ್ಲಾ ಶಾಖೆ ಹಾಗೂ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಿತಿಯ ಜಂಟಿ ಆಶ್ರಯದಲ್ಲಿ ಸೇವಾ ನಿವೃತ್ತಿಗೊಳ್ಳಲಿರುವ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಇವರ ಅಭಿನಂದನಾ ಸಮಾರಂಭ ಜೂ.೨೬ರ ರವಿವಾರ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಲಿದೆ.

ಇದರೊಂದಿಗೆ ಉಡುಪಿ ಜಿಲ್ಲಾ ಸರಕಾರಿ ನೌಕರರ ೨೦೨೨ನೇ ಸಾಲಿನ ವಾರ್ಷಿಕ ಮಹಾಸಭೆ ಅದೇ ದಿನ ಅಪರಾಹ್ನ ನಡೆಯಲಿದೆ ಎಂದು ಕುಂದಾಪುರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಇಂದಿಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾರಂಭವನ್ನು ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸಮಾರಂಭದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಮತ್ತು ಕನ್ನಡ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನಿಲ್‌ಕುಮಾರ್, ಉಡುಪಿ ಶಾಸಕ ಕೆ.ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಸಿಇಓ ಪ್ರಸನ್ನ ಎಚ್., ಎಸ್ಪಿ ಎನ್.ವಿಷ್ಣುವರ್ಧನ್ ಉಪಸ್ಥಿತರಿರುವರು ಎಂದರು.

ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ 9 ರಿಂದ ಶೇರಿಗಾರ್ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ ನಡೆಯಲಿದೆ. ಅಪರಾಹ್ನ ೨:೩೦ಕ್ಕೆ ಸಂಘದ ವಾರ್ಷಿಕ ಮಹಾಸಭೆ ಸಿ.ಎಸ್.ಷಡಾಕ್ಷರಿ ಉಪಸ್ಥಿತಿಯಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.೯೫ಕ್ಕಿಂತ ಅಧಿಕ ಅಂಕಗಳನ್ನು ಪಡೆದ ಸರಕಾರಿ ನೌಕರರ ಮಕ್ಕಳನ್ನು ಸನ್ಮಾನಿಸಲಾಗುವುದು. ಅಲ್ಲದೇ  ನಿವೃತ್ತರಾದ ಸರಕಾರಿ ನೌಕರರನ್ನು ಅಭಿನಂದಿಸಲಾಗುವುದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹಾವಂಜೆ, ಕಿರಣ್ ಹೆಗ್ಡೆ, ಧರ್ಮೇಂದರ್ ಎಸ್.ರಾಘವ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News