ಶಿವಸೇನೆಯ ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ಹೊಟೇಲ್ ಹೊರಗೆ ಟಿಎಂಸಿ ಬೃಹತ್ ಪ್ರತಿಭಟನೆ
ಗುವಾಹಟಿ: ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರು ತಂಗಿರುವ ಗುವಾಹಟಿಯ ರಾಡಿಸನ್ ಬ್ಲೂ ಹೋಟೆಲ್ನ ಹೊರಗೆ ತೃಣಮೂಲ ಕಾಂಗ್ರೆಸ್ ಗುರುವಾರ ಬೆಳಗ್ಗೆ ಬೃಹತ್ ಪ್ರತಿಭಟನೆ ನಡೆಸಿದೆ ಎಂದು ವರದಿಯಾಗಿದೆ.
ಪ್ರತಿಭಟನೆಯ ನೇತೃತ್ವವನ್ನು ತೃಣಮೂಲ ಕಾಂಗ್ರೆಸ್ನ ಅಸ್ಸಾಂ ಮುಖ್ಯಸ್ಥ ರಿಪುನ್ ಬೋರಾ ವಹಿಸಿದ್ದರು. ಹೆಚ್ಚಿನ ಸಂಖ್ಯೆಯ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರನ್ನು ತಡೆಯಲು ಪ್ರಯತ್ನಿಸಿದರು.
ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರಕಾರವನ್ನು ಉರುಳಿಸಲು, ಶಿವಸೇನೆ ಶಾಸಕರ ಬಂಡಾಯವನ್ನು ಸಕ್ರಿಯಗೊಳಿಸಲು ಅಸ್ಸಾಂನ ಆಡಳಿತಾರೂಢ ಬಿಜೆಪಿ ತನ್ನ ಎಲ್ಲಾ ಸಂಪನ್ಮೂಲಗಳನ್ನು ಹೂಡಿಕೆ ಮಾಡಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು.
ರಾಜ್ಯದಲ್ಲಿ ಭಾರೀ ಪ್ರವಾಹದಿಂದ ಹಾನಿಗೊಳಗಾದವರ ಸಂಕಷ್ಟಗಳನ್ನು ನಿವಾರಿಸಲು ರಾಜ್ಯ ಸರಕಾರ ಏನೂ ಮಾಡಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.
ಅಸ್ಸಾಂನಲ್ಲಿ ಬ್ರಹ್ಮಪುತ್ರ ಹಾಗೂ ಬರಾಕ್ ನದಿಗಳ ನೀರಿನ ಏರಿಕೆಯಿಂದ ಉಂಟಾದ ಪ್ರವಾಹದಿಂದ 55 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಮೇ ತಿಂಗಳಿನಿಂದ ಇಲ್ಲಿಯವರೆಗೆ 89 ಜನರು ಪ್ರವಾಹಕ್ಕೆ ಬಲಿಯಾಗಿದ್ದಾರೆ.
#WATCH | Members and workers of Assam unit of TMC protest outside Radisson Blu Hotel in Guwahati where rebel Maharashtra MLAs, including Shiv Sena's Eknath Shinde, are staying.
— ANI (@ANI) June 23, 2022
Party's state president Ripun Bora is leading the protest here. pic.twitter.com/rfoD0fQSKU