ನೀಲಾವರ: ಮಳೆಗೆ ಮನೆ ಸಂಪೂರ್ಣ ಹಾನಿ

Update: 2022-06-23 12:33 GMT

ಉಡುಪಿ : ಕಳೆದೆರಡು ದಿನಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಇಂದು ಮಳೆಯ ಬಿರುಸು ಕಡಿಮೆಯಾಗಿದ್ದು, ದಿನವಿಡಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆಯ ಬಳಿಕ ಅನೇಕ ಕಡೆಗಳಲ್ಲಿ ಮಳೆ ಸತತವಾಗಿ ಸುರಿಯ ತೊಡಗಿದೆ.

ಕರಾವಳಿಯ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಇದ್ದರೂ, ನಿರೀಕ್ಷಿತ ಪ್ರಮಾಣ ದಲ್ಲಿ ಮಳೆ ಬೀಳುತ್ತಿಲ್ಲ. ಮೀನುಗಾರಿಕೆ ನಡೆಸದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಹೆಚ್ಚಿನ ನಾಡದೋಣಿ ಮೀನುಗಾರರು ಸಮುದ್ರಕ್ಕೆ ಇಳಿದಿಲ್ಲ.

ನಿನ್ನೆಯ ಭಾರೀ ಮಳೆಗೆ ಬ್ರಹ್ಮಾವರ ತಾಲೂಕು ನೀಲಾವರ ಗ್ರಾಮದ ಪ್ರೇಮ ಎಂಬವರ ವಾಸ್ತವ್ಯದ ಪಕ್ಕಾ ಮನೆಯ ಗೋಡೆ ಸಂಪೂರ್ಣ ಕುಸಿದುಬಿದ್ದಿದೆ. ಇದರಿಂದ ಸುಮಾರು ಒಂದು ಲಕ್ಷ ರೂ.ಗಳಿಗೂ ಅಧಿಕ ಹಾನಿಯ ಅಂದಾಜು ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News