ಜೂ.24: ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ನವ ಸಂಕಲ್ಪ ಶಿಬಿರ

Update: 2022-06-23 12:36 GMT

ಉಡುಪಿ, ಜೂ.೨೩: ಉಡುಪಿ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ಉಡುಪಿ   ಪುತ್ತೂರಿನ ಅಮೃತ್ ಗಾರ್ಡನ್‌ನಲ್ಲಿ ಜೂ.೨೪ರ ಶುಕ್ರವಾರ ಒಂದು ದಿನದ  ನವ ಸಂಕಲ್ಪ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ  ೯:೩೦ಕ್ಕೆ  ಶಿಬಿರದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಳಿಕ ನಡೆಯುವ ಚಿಂತನ ಶಿಬಿರದಲ್ಲಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ವಿವಿಧ ಸಮಿತಿಗಳಿಂದ ಪಡೆದ ಅಭಿಪ್ರಾಯ, ಶಿಫಾರಸು ಮತ್ತು ಸಲಹೆಗಳ  ಕ್ರೋಡೀಕರಣ ನಡೆಯಲಿದೆ. ಸಂಜೆ ೫:೦೦ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ.

ನವ ಸಂಕಲ್ಪ ಶಿಬಿರದಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ  ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿಗಳಾದ ಮಾಜಿ ಸಚಿವ  ಅಭಯಚಂದ್ರ ಜೈನ್, ಮತ್ತೊಬ್ಬ ಉಪಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ ಸೊರಕೆ, ಮಾಜಿ ಶಾಸಕ ಯು.ಆರ್.ಸಭಾಪತಿ, ಎಂ.ಎ.ಗಫೂರ್,  ಉಡುಪಿ  ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಗಳಾದ ಮಿಥುನ್  ರೈ, ಮಮತಾ ಗಟ್ಟಿ  ಅಲ್ಲದೇ ಜಿಲ್ಲಾ  ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ ಕೊಡವೂರು ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News