ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Update: 2022-06-23 15:01 GMT

ಉಡುಪಿ : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ, ಕೌಶಲ್ಯ ಉನ್ನತೀಕರಣ ಯೋಜನೆ, ಸ್ವಯಂ ಉದ್ಯೋಗಗಳಾದ ಸ್ವಾವಲಂಬಿ/ ಸಂಚಾರ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮಶಿಲ್ಪ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ ಹಾಗೂ ಡಾ. ಬಾಬು ಜಗಜೀವನ ರಾಂ ವಸತಿ ಕಾರ್ಯಾಗಾರ ನಿರ್ಮಾಣ ಯೋಜನೆಗಳಿಗೆ ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ ೩೦ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ -http://lidkar.com-, ಸಹಾಯವಾಣಿ ಸಂಖ್ಯೆ: ೯೪೮೨೩೦೦೪೦೦ ಅಥವಾ ಜಿಲ್ಲಾ ಸಂಯೋಜಕರು ಮೊ.ನಂ: ೬೩೬೨೮೯೧೦೧೭ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News