ಕೋಲಾರ : ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Update: 2022-06-24 05:57 GMT

ಕೋಲಾರ: ಜಿಲ್ಲೆಯ ಮುಳಬಾಗಿಲು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಕೊಲೆ‌ ಪ್ರಕರಣದ ಪ್ರಮುಖ ಆರೋಪಿ ಬಾಲಾಜಿ ಸಿಂಗ್ ಎಂಬಾತನ ಮೇಲೆ ಪೊಲೀಸರು ಫೈರಿಂಗ್ ಮಾಡಿ, ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು ವಾಪಸ್ಸು ಬರುತ್ತಿದ್ದ ವೇಳೆ ಕೋಲಾರ ಹೊರವಲಯದ ಮಡೇರಹಳ್ಳಿ ಅರಣ್ಯ ಪ್ರದೇಶ ಬಳಿ ಮೂತ್ರವಿಸರ್ಜನೆ ಮಾಡಬೇಕೆಂದು ಕೇಳಿದಾಗ ವಾಹನ ನಿಲ್ಲಿಸಿ, ಕೈಕೋಳ ಬಿಚ್ಚಿದ ವೇಳೆ ಪೇದೆಯ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತ್ ಎಚ್ಚರಿಕೆ ನೀಡಿದರೂ ಲೆಕ್ಕಿಸದೆ ಪೇದೆಗೆ ಕಲ್ಲಿನಿಂದ ಹೊಡೆದು ಓಡಲು ಯತ್ನಿಸಿದ್ದು, ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದು, ನಂತರ ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತ್ ಆರೋಪಿಯ ಕಾಲಿನ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಗಾಯಗೊಂಡ ಬಾಲಾಜಿ ಸಿಂಗ್ ಮತ್ತು ಪೊಲೀಸ್ ಪೇದೆ‌ ವಿನಾಯಕ್ ಅವರನ್ನು ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಲಾರ ಜಿಲ್ಲಾಸ್ಪತ್ರೆಗೆ ಎಸ್ಪಿ ದೇವರಾಜ್, ಡಿವೈಎಸ್ಪಿ ಜೈ ಶಂಕರ್ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News