ಬಂಡಾಯ ಶಾಸಕರು ಶಿವಸೇನೆಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ: ಉದ್ಧವ್ ಠಾಕ್ರೆ

Update: 2022-06-24 09:43 GMT

ಮುಂಬೈ: "ಬಂಡಾಯ ಶಾಸಕರು ಶಿವಸೇನೆಯನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಬಿಟ್ಟುಹೋದವರ ಬಗ್ಗೆ ನಾನೇಕೆ ಬೇಸರ ಮಾಡಿಕೊಳ್ಳಲಿ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪಕ್ಷದ ಸಭೆಯೊಂದರಲ್ಲಿ ಹೇಳಿದ್ದಾರೆ ಎಂದು  ಮೂಲಗಳನ್ನು ಉಲ್ಲೇಖಿಸಿ NDTV ವರದಿ ಮಾಡಿದೆ.

ಸದ್ಯ ಗುವಾಹಟಿಯ ಹೊಟೇಲ್ ನಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರ ನಾಯಕ ಏಕನಾಥ್ ಶಿಂಧೆ ಅವರು 40 ಶಿವಸೇನೆ ಶಾಸಕರು ಸೇರಿದಂತೆ 50 ಶಾಸಕರು ನನ್ನ ಬೆಂಬಲಕ್ಕೆ ನಿಂತಿದ್ದಾರೆ ಎಂದು NDTVಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News