ಜಿಡಿಪಿಯ ಒಂದರಷ್ಟು ಅನುದಾನ ಕ್ರೀಡೆಗೆ ಮೀಸಲಿಡಿ: ಸಚಿವ ನಾರಾಯಣಗೌಡ ಸಲಹೆ

Update: 2022-06-24 13:12 GMT

ಬೆಂಗಳೂರು, ಜೂ. 24: ‘ಯುವ ಸಬಲೀಕರಣ ಮತ್ತು ಕ್ರೀಡೆಗೆ ದೇಶದ ಜಿಡಿಪಿಯ ಒಂದರಷ್ಟು ಅನುದಾನವನ್ನು ಮೀಸಲಿಡಬೇಕು' ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ಅವರು ಇಂದಿಲ್ಲಿ ಸಲಹೆ ನೀಡಿದ್ದಾರೆ. 

ಶುಕ್ರವಾರ ಗುಜರಾತ್‍ನ ಕೆವಾಡಿಯಾದಲ್ಲಿ ಎರಡು ದಿನಗಳ ಕಾಲ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರುಗಳ ರಾಷ್ಟ್ರೀಯ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಈ ಸಮ್ಮೇಳನದಲ್ಲಿ ದೇಶದಲ್ಲಿ ಕ್ರೀಡೆ ಅಭಿವೃದ್ಧಿ ಹಾಗೂ ಕ್ರೀಡಾ ಚಟುವಟಿಕೆಗಳ ಉತ್ತೇಜನ ಸೇರಿದಂತೆ ಹಲವು ವಿಚಾರಗಳ ಕುರಿತು ಸಮಗ್ರವಾಗಿ ಚರ್ಚಿಸಲಾಗುತ್ತಿದೆ' ಎಂದರು.

ರಾಜ್ಯದಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ನೆರವೇರಿಸಿದ್ದು, ಇದಕ್ಕೆ ರಾಜ್ಯ ಸರಕಾರದಿಂದ ಕೈಗೊಂಡಿದ್ದ ಕ್ರಮಗಳ ಬಗ್ಗೆ ವಿವರಿಸಿದರು. ಇದಲ್ಲದೆ, ಅಮೃತ ಕ್ರೀಡಾ ದತ್ತು ಯೋಜನೆ, ಕ್ರೀಡಾ ಅಂಕಣ ಯೋಜನೆ ಸೇರಿದಂತೆ ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ  ಪ್ರೋತ್ಸಾಹಿಸಲು ರೂಪಿಸಿರುವ ಯೋಜನೆಗಳ ಬಗ್ಗೆ ನಾರಾಯಣಗೌಡ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News