​ಉಡುಪಿ: ನೂತನ ಕೆಎಸ್ಸಾರ್ಟಿಸಿ ನಿಲ್ದಾಣದಿಂದ ಸಾರಿಗೆ ಕಾರ್ಯಾಚರಣೆ

Update: 2022-06-24 14:53 GMT

ಉಡುಪಿ: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿ ರುವ ಡಾ.ವಿ.ಎಸ್. ಆಚಾರ್ಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಉಡುಪಿ ನಗರ, ಜಿಲ್ಲಾ, ಅಂತರ್ ಜಿಲ್ಲಾ ಮತ್ತು ಅಂತರ್‌ರಾಜ್ಯ ವ್ಯಾಪ್ತಿಯ ಸ್ಥಳಗಳಿಗೆ ನಿಗಮದ ಎಲ್ಲಾ ಸಾರಿಗೆಗಳು ಸಂಚರಿಸಲಿದ್ದು,  ಸಾರ್ವಜನಿಕರು, ಎಲ್ಲಾ ಪ್ರಯಾಣಿಕರು, ವಿದ್ಯಾರ್ಥಿಗಳು ಈ ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಬಸ್ ನಿಲ್ದಾಣದಲ್ಲಿ ೮ ವಾಣಿಜ್ಯ ಮಳಿಗೆ, ೧ ಉಪಹಾರ ಗೃಹ, ೩ ರಿಟೇಲ್ ಮಳಿಗೆ, ಒಂದು ದ್ವಿಚಕ್ರ/ಕಾರ್ ಪಾರ್ಕಿಂಗ್ ವ್ಯವಸ್ಥೆ, ಮೊದಲ ಅಂತಸ್ತು ಮತ್ತು ಎರಡನೇ ಅಂತಸ್ತಿನ ಹಾಲ್, ಸಂಚಾರ ನಿಯಂತ್ರಣ ಕೊಠಡಿ, ಪ್ಲಾಟ್‌ಫಾರಂ, ಪಾಸ್ ಕೌಂಟರ್, ಪುರುಷ ಮತ್ತು ಮಹಿಳಾ ಶೌಚಾಲಯ, ವಿಶ್ರಾಂತಿ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ ಮುಂತಾದ ಮೂಲಭೂತ ಸೌಲಭ್ಯಗಳಿದ್ದು, ವಾಹನಗಳ ಆಗಮನ-ನಿರ್ಗಮನಗಳ ವೇಳಾಪಟ್ಟಿಯ ಬೋರ್ಡನ್ನು ಅಳವಡಿಸಲಾಗಿದೆ ಎಂದು ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರ ಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News