ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2022-06-24 16:20 GMT

ಉಡುಪಿ: ಐದು ತಿಂಗಳಿನ ಹಿಂದೆ ರಸ್ತೆ ಅಪಘಾತದಲ್ಲಿ ಬಲ ಕೈ ಕಳೆದುಕೊಂಡಿದ್ದ ಪುತ್ತೂರು ಗ್ರಾಮದ ಎಲ್‌ವಿಟಿ ದೇವಸ್ಥಾನದ ಹಿಂಬದಿ ನಿವಾಸಿ ರಾಜ್ ಕಿಶನ್ (36) ಎಂಬವರು ಮಾನಸಿಕವಾಗಿ ನೊಂದು ಜೂ.22ರಂದು ರಾತ್ರಿ ವೇಳೆ ಫ್ಯಾನಿಗೆ ನೇಣು ಬಿಗಿದು  ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ಶೇಖರ (53) ಎಂಬವರು ಧರ್ಮಸ್ಥಳ ಸಂಘದ ಸಾಲ ವನ್ನು ತೀರಿಸಲಾಗದೆ ಜೀವನದಲ್ಲಿ ಜಿಗೂಪ್ಸೆಗೊಂಡು ಜೂ.೨೩ರಂದು ಬೆಳಗ್ಗೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News