ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಜು.2ಕ್ಕೆ ರಾಜ್ಯಾದ್ಯಂತ ಪ್ರತಿಭಟನೆ

Update: 2022-06-24 18:01 GMT

ಬೆಂಗಳೂರು, ಜೂ.24: ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸ್ಸುಗಳನ್ನು ಅಳವಡಿಸಿಕೊಳ್ಳುವಂತೆ ಆಗ್ರಹಿಸಿ ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿಯು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜು.2ಕ್ಕೆ ಪ್ರತಿಭಟನೆ ನಡೆಸಲು ಕರೆ ನೀಡಿದೆ. 

ಶುಕ್ರವಾರ ಪ್ರೆಸ್‍ಕ್ಲಬ್‍ನಲ್ಲಿ ಎಂ.ಸಿ. ಶ್ರೀನಿವಾಸ್ ಮಾತನಾಡಿ, ಬಿಜೆಪಿ ಸರಕಾರವು ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನ ಮಾಡುವುದಾಗಿ ತಿಳಿಸಿತ್ತು. ಆದರೆ ಇದುವರೆಗೂ ಅನುಷ್ಠಾನ ಮಾಡಲಿಲ್ಲ. ಹಾಗಾಗಿ ಸರಕಾರದ ವಿಳಂಬ ದೋರಣೆಯನ್ನು ಖಂಡಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಪ್ರತಿಭಟನೆಯ ಅಂಗವಾಗಿ ಬಾಗೇಪಲ್ಲಿ-ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗುವುದು ಎಂದರು. 
ಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ಎಂ. ದೇವರಾಜು, ರಂಗನಾಥ್, ಜೆ. ನರಸಿಂಹ ಮೂರ್ತಿ ಮತ್ತಿತತರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News