ಕಾಸರಗೋಡು: ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಲಾರಿ; ಓರ್ವ ಮೃತ್ಯು

Update: 2022-06-25 06:50 GMT

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ತೋಡಿಗೆ  ಬಿದ್ದು  ಓರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನೀಲೇಶ್ವರ ಪರಪಚ್ಚಾಲ್ ನಲ್ಲಿ ನಡೆದಿದೆ.

ಪಾಲಕ್ಕಾಡ್ ಮಣ್ಣರಕ್ಕಾಡ್ ನ ಹಬೀಬ್ (50) ಮೃತಪಟ್ಟವರು.

ಚಾಲಕ ರಹೀಮ್ ಗಾಯಗೊಂಡಿದ್ದಾರೆ. ನೀಲೇಶ್ವರ ಕಡೆಗೆ ಸಿಮೆಂಟ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಪರಪ್ಪಚ್ಚಾಲ್ ನ ಸೇತುವೆ ಯಿಂದ ತೋಡಿಗೆ ಬಿದ್ದಿದ್ದು,  ಲಾರಿಯಲ್ಲಿ ಸಿಲುಕಿದ್ದ ಇಬ್ಬರನ್ನು ಸ್ಥಳೀಯರು ಹಾಗೂ ಅಗ್ನಿ ಶಾಮಕದಳದ ಸಿಬ್ಬಂದಿ ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸಿದರೂ, ಹಬೀಬ್ ಮೃತಪಟ್ಟಿದ್ದರು ಎಂದು ತಿಳಿದುಬಂದದೆ.

ಈ ಬಗ್ಗೆ ನೀಲೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News