ಕನ್ನಡ-ಸಂಸ್ಕೃತಿ ಇಲಾಖೆಯ ಸಹಾಯಧನ: ಅರ್ಜಿ ಆಹ್ವಾನ

Update: 2022-06-25 12:44 GMT

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯ ನಿರ್ವಹಿಸು ತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಸಹಾಯಧನ ನೀಡಲು ಸೇವಾಸಿಂಧು -Sevasindhu.karnataka.gov.in- ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ ೨೦ ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಇಲಾಖೆಯ - www.kannadasiri.karnataka.gov.in-, ಮೊ.ನಂ: ೯೩೮೦೨೦೬೭೦೪, ೮೦೮೮೩೦೪೮೫೫, ೯೯೮೬೮೩೭೦೩೭, ೭೮೯೯೬೬೪೧೦೧, ೯೪೪೮೮೩೦೧೨೭ ಅಥವಾ ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಸೇವಾಸಿಂಧು ಇವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News