ಎಸೆಸೆಲ್ಸಿ ಪೂರಕ ಪರೀಕ್ಷೆ ತರಬೇತಿ ಶಿಬಿರದ ಸಮಾರೋಪ

Update: 2022-06-25 12:49 GMT

ಕುಂದಾಪುರ, ಜೂ.೨೫: ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಇಟ್ಟು ಕೊಂಡು ಕನಸನ್ನು ಕಾಣಬೇಕು. ಆ ಕನಸು ನನಸಾಗಿಸಿಕೊಂಡು ಜೀವನದಲ್ಲಿ ಯಶಸ್ಸು ಕಾಣಲು ಪ್ರಯತ್ನಿಸಿದಾಗ ಉತ್ತಮವಾದ ಅಂಕವನ್ನು ಪಡೆದು ಶೈಕ್ಷಣಿಕ ವಾಗಿ ಮುಂದುವರಿಯಲು ಸಾಧ್ಯ ಎಂದು ಡಯಟ್ ಉಪನ್ಯಾಸಕ ಚಂದ್ರ ನಾಯ್ಕ್ ಹೇಳಿದ್ದಾರೆ.

ಐಟಿಡಿಪಿ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಕ್ಕಳ ಮನೆ ಕುಂಭಾಶಿ ಜಂಟಿ ಆಶ್ರಯದಲ್ಲಿ ಪೂರಕ ಪರೀಕ್ಷೆ ಬರೆಯುವ ಎಸೆಸೆಲ್ಸಿ  ವಿದ್ಯಾರ್ಥಿ ಗಳಿಗೆ ವಿಶೇಷ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತಿದ್ದರು.

ವಿದ್ಯಾರ್ಥಿಗಳು ಸತತ ಪರಿಶ್ರಮ, ಏಕಾಗ್ರತೆ, ಮನೋಸ್ಥೈರ್ಯ ಬೆಳೆಸಿ ಕೊಳ್ಳುವ ಜೊತೆಗೆ ತಮ್ಮಲ್ಲಿರುವ ಕೀಳರಿ ಮೆಯನ್ನು ಬಿಟ್ಟು ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮುಖ್ಯವಾಹಿನಿಗೆ ಬರಬೇಕು ಎಂದವರು ತಿಳಿಸಿದರು.  

ಕೊರಗ ಸಮುದಾಯದ ಮುಖಂಡರಾದ ಗಣೇಶ್ ಕುಂದಾಪುರ, ಗಣೇಶ್ ಬಾರ್ಕೂರು ಉಪಸ್ಥಿತರಿದ್ದರು. ಮಕ್ಕಳ ಮನೆಯ ವಿನಿತಾ ಕಾರ್ಯಕ್ರಮ ನಿರೂಪಿಸಿದರು. ನಿರಂಜಿನಿ ಸ್ವಾಗತಿಸಿದರು. ಸುದರ್ಶನ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News