ಬೆಳಗಾವಿ | ಭೀಕರ ರಸ್ತೆ ಅಪಘಾತಕ್ಕೆ ಏಳು ಮಂದಿ ಬಲಿ: ಮೂವರು ಗಂಭೀರ

Update: 2022-06-26 04:39 GMT

ಬೆಳಗಾವಿ, ಜೂ.26: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವೊಂದು ನಾಲೆಗೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ ಘಟನೆ ತಾಲೂಕಿನ ಕಣಬರಗಿ ಸಮೀಪ ರವಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ದಿನಗೂಲಿ ಕೆಲಸಕ್ಕೆಂದು ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳ ಗ್ರಾಮದಿಂದ ಬೆಳಗಾವಿಗೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಗಾಲೆಗೆ ಉರುಳಿಬಿದ್ದಿದೆ. ಈ ವೇಳೆ ಕ್ರೂಸರನಲ್ಲಿದ್ದವರ ಪೈಕಿ ಏಳು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕ್ರೂಸರ್ ನಲ್ಲಿ 12 ಮಂದಿ ಇದ್ದರೆನ್ನಲಾಗಿದೆ. ಅಪಘಾತಕ್ಕೀಡಾದ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮಾರಿಹಾಳ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News