ಕೊಡಗು: ಹಿರಿಯ ಪತ್ರಕರ್ತ ‌ಮನು ಶೆಣೈ ನಿಧನ

Update: 2022-06-26 06:33 GMT

ಕೊಡಗು, ಜೂ.26: ಹಿರಿಯ ಪತ್ರಕರ್ತ, ಕೊಡಗು ಪತ್ರಿಕಾಭವನ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ, ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್.ಮನು ಶೆಣೈ(64) ರವಿವಾರ ಮುಂಜಾನೆ ನಿಧನರಾಗಿದ್ದಾರೆ.

ಅವರಿಗೆ ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಮನು ಶೆಣೈಯವರು ಪ್ರಗತಿಪರ ಚಿಂತಕ, ದಿವಂಗತ ಎ.ಕೆ.ಸುಬ್ಬಯ್ಯನವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡಿದ್ದರು.

 ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳು ಹಾಗೂ ಅಪಾರ ಸ್ನೇಹಿತ ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News