ಕಾಸರಗೋಡು | ಮೀನುಗಾರಿಕಾ ದೋಣಿ ಪಲ್ಟಿ: ಓರ್ವ ಸಮುದ್ರಪಾಲು

Update: 2022-06-26 06:38 GMT
ಸಾಂದರ್ಭಿಕ ಚಿತ್ರ (Source: PTI)

ಕಾಸರಗೋಡು, ಜೂ.26: ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಓರ್ವ ಸಮುದ್ರ ಪಾಲಾದ ಘಟನೆ ಹೊಸದುರ್ಗದ ತುರುತ್ತಿ ಎಂಬಲ್ಲಿ ರವಿವಾರ ಬೆಳಗ್ಗೆ ನಡೆದಿದ್ದು, ಇಬ್ಬರು ಈಜಿ ದಡ ಸೇರಿದ್ದಾರೆ.

ಸಮುದ್ರಕ್ಕೆ ಬಿದ್ದ ಸೂರಜ್ (28) ಎಂಬವರು ನಾಪತ್ತೆಯಾಗಿದ್ದು, ಅವರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ, ಹಾಗೂ ಕಂದಾಯ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ನಾಡ ದೋಣಿಯಲ್ಲಿ ಮೀನುಗಾರಿಕೆ ಗೆ ತೆರಳಿದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News