ಉದ್ಧವ್ ಠಾಕ್ರೆ ಸಂಪರ್ಕದಲ್ಲಿ 20 ಶಿವಸೇನೆ ಬಂಡಾಯ ಶಾಸಕರು: ವರದಿ

Update: 2022-06-26 07:37 GMT

ಮುಂಬೈ: ಬಂಡಾಯ ನಾಯಕ ಏಕನಾಥ್ ಶಿಂಧೆ ಅವರೊಂದಿಗೆ ಅಸ್ಸಾಂನ ಹೊಟೇಲ್ ನಲ್ಲಿ ಬೀಡುಬಿಟ್ಟಿರುವ ಕನಿಷ್ಠ 20 ಶಾಸಕರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

ಬಂಡಾಯ ಶಾಸಕರ ಗುಂಪು  ಬಿಜೆಪಿಯೊಂದಿಗೆ ವಿಲೀನಗೊಳ್ಳುವುದನ್ನು ಕೆಲವು ಬಂಡಾಯ ಶಾಸಕರು ವಿರೋಧಿಸುತ್ತಿದ್ದಾರೆ ಎಂದು ಎನ್‌ಡಿಟಿವಿಗೆ ತಿಳಿದು ಬಂದಿದೆ.

ರವಿವಾರ  ಬೆಳಗ್ಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ(ಎನ್ ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಬಾಳಾಸಾಹೇಬ್ ಥೋರಟ್, ಅಶೋಕ್ ಚವ್ಹಾಣ್ ಹಾಗೂ  ಶಿವಸೇನಾ ಸಂಸದ ಅನಿಲ್ ದೇಸಾಯಿ ಉಪಸ್ಥಿತರಿದ್ದರು.

 ಏತನ್ಮಧ್ಯೆ, ಗುವಾಹಟಿಯಲ್ಲಿ ಶಿಂಧೆ ಅವರು ಮುಂದಿನ ಕಾರ್ಯತಂತ್ರವನ್ನು ಚರ್ಚಿಸಲು ಅವರೊಂದಿಗೆ ಬೀಡುಬಿಟ್ಟಿರುವ ಶಾಸಕರ ಸಭೆಯನ್ನು ಕರೆದಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News