ಉಪಚುನಾವಣೆ: ಭಗವಂತ್ ಮಾನ್ ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಲೋಕಸಭಾ ಕ್ಷೇತ್ರದಲ್ಲಿ ಆಪ್ ಗೆ ಸೋಲು

Update: 2022-06-26 09:34 GMT
ಭಗವಂತ್ ಮಾನ್ (PTI)

 ಹೊಸದಿಲ್ಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಂದ ತೆರವಾದ  ಸಂಗ್ರೂರ್ ಲೋಕಸಭಾ ಕ್ಷೇತ್ರಕ್ಕೆ ನಡೆದ  ಉಪ ಚುನಾವಣೆಯಲ್ಲಿ ಶಿರೋಮಣಿ ಅಕಾಲಿದಳ(ಅಮೃತಸರ)  ನಾಯಕ ಸಿಮ್ರಾನ್ ಜಿತ್ ಸಿಂಗ್ ಮಾನ್ 7,052 ಮತಗಳಿಂದ  ಗೆಲುವು ಸಾಧಿಸಿದ್ದಾರೆ. ಈ ಮೂಲಕ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ.

ಈಗ ರಾಜ್ಯದ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ ಅವರು 2014 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಸಂಗ್ರೂರ್ ಕ್ಷೇತ್ರವನ್ನು ಗೆದ್ದಿದ್ದರು.

77 ವರ್ಷದ ಸಿಮ್ರಾನ್ ಜಿತ್ ಸಿಂಗ್ ಮಾನ್ ಅವರು ಮಾಜಿ ಸಂಸದರಾಗಿದ್ದು,  ಶಿರೋಮಣಿ ಅಕಾಲಿದಳದ (ಅಮೃತಸರ) ಅಧ್ಯಕ್ಷರಾಗಿದ್ದಾರೆ .  

ಕಾಂಗ್ರೆಸ್ ಅಭ್ಯರ್ಥಿ ದಲ್ವೀರ್ ಸಿಂಗ್ ಗೋಲ್ಡಿ, ಬಿಜೆಪಿಯ ಕೇವಲ್ ಧಿಲ್ಲೋನ್ ಹಾಗೂ  ಅಕಾಲಿದಳದ ಕಮಲದೀಪ್ ಕೌರ್ ರಾಜೋನಾ ಕ್ರಮವಾಗಿ ಮೂರು, ನಾಲ್ಕು ಹಾಗೂ  ಐದನೇ ಸ್ಥಾನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News