ಚಿಂತಕ ಜಿ.ರಾಜಶೇಖರ್ ಆಸ್ಪತ್ರೆಗೆ ದಾಖಲು
Update: 2022-06-26 15:52 GMT
ಉಡುಪಿ: ನಾಡಿನ ಹಿರಿಯ ಚಿಂತಕ ಜಿ.ರಾಜಶೇಖರ್(೭೫) ಅನಾ ರೋಗ್ಯದಿಂದ ರವಿವಾರ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರಿಗೆ ಎರಡು ಮೂರು ದಿನಗಳ ಕಾಲ ಚಿಕಿತ್ಸೆ ಅಗತ್ಯ ಇದೆ ಎಂದು ವೈದ್ಯರು ತಿಳಿಸಿದ್ದಾರೆ. ಇವರು ೨೦೧೯ರಿಂದ ಪ್ರೊಗ್ರೆಸಿವ್ ಸುಪ್ರನ್ ನ್ಯೂಕ್ಲಿಯರ್ ಪಾಲ್ಸಿ(ಪಾರ್ಕಿಂಸನ್ ಪ್ಲಸ್) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ.