ಶಿವಸೇನೆ ಕಾರ್ಯಕರ್ತರಿಂದ ಬಂಡಾಯ ಶಾಸಕರ ವಿರುದ್ಧ ‘ಚಪ್ಪಲಿಯಿಂದ ಹೊಡೆಯಿರಿ’ ಅಭಿಯಾನ

Update: 2022-06-26 17:37 GMT

ಹೊಸದಿಲ್ಲಿ, ಜೂ. 26: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬೆಂಬಲ ನೀಡುತ್ತಿರುವ ಶಿವಸೇನೆ ಕಾರ್ಯಕರ್ತರು ಶಿವಸೇನೆಯ ಬಂಡಾಯ ಶಾಸಕರ ವಿರುದ್ಧ ಪುಣೆಯಲ್ಲಿ ರವಿವಾರ ‘ಚಪ್ಪಲಿಯಿಂದ ಹೊಡೆಯಿರಿ’ ಆಂದೋಲನವನ್ನು ನಡೆಸಿದ್ದಾರೆ.

ಏಕನಾಥ ಶಿಂದೆ ನೇತೃತ್ವದ ಬಂಡಾಯ ಶಾಸಕರ ವಿರುದ್ಧ ಮಹಾರಾಷ್ಟ್ರದ ವಿವಿಧೆಡೆ ಶಿವಸೇನೆ ಕಾರ್ಯಕರ್ತರ ಪ್ರತಿಭಟನೆ ಮುಂದುವರಿದಿದೆ. ಪುಣೆಯಲ್ಲಿ ಉದ್ಧವ್ ಠಾಕ್ರೆ ಅವರನ್ನು ಬೆಂಬಲಿಸಿ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದ ಕಾರ್ಯಕರ್ತರು ಬಂಡಾಯ ಶಾಸಕರ ಚಿತ್ರಗಳಿಗೆ ಚಪ್ಪಲಿಯಿಂದ ಹೊಡೆದು ಪ್ರತಿಭಟಿಸಿದರು.

ಇನ್ನೊಂದೆಡೆ ಶಿಂದೆ ಬೆಂಬಲಿಗರು ಉದ್ಧವ್ ಠಾಕ್ರೆ ಪೋಸ್ಟರ್‌ಗಳಿಗೆ ಕಪ್ಪು ಬಣ್ಣ ಬಳಿದಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ನೇತೃತ್ವದ ಶಿವಸೇನೆ ಬಣ ಹಾಗೂ ಬಂಡಾಯ ನಾಯಕ ಏಕನಾಥ ಶಿಂದೆ ಅವರ ನಡುವೆ ಅಧಿಕಾರಕ್ಕಾಗಿ ಹೋರಾಟ ನಡೆಯುತ್ತಿರುವ ನಡುವೆ ಈ ಬೆಳವಣಿಗೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News