ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಯಶವಂತ್ ಸಿನ್ಹಾಗೆ ಟಿಆರ್‌ಎಸ್ ಬೆಂಬಲ

Update: 2022-06-27 06:46 GMT
Photo:PTI

ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆಗೆ  ವಿರೋಧ ಪಕ್ಷದ ಜಂಟಿ ಅಭ್ಯರ್ಥಿಯಾಗಿರುವ  ಯಶವಂತ್ ಸಿನ್ಹಾ ಅವರಿಗೆ  ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಬೆಂಬಲ ವ್ಯಕ್ತಪಡಿಸಿದೆ. 

ಇಂದು ಪಕ್ಷದ ನಿರ್ಧಾರವನ್ನು ಪ್ರಕಟಿಸಿದ ತೆಲಂಗಾಣ ಸಚಿವ ಕೆ.ಟಿ. ರಾಮರಾವ್ , ಸಿನ್ಹಾ ಅವರು ಇಂದು ನಾಮ ಪತ್ರ ಸಲ್ಲಿಕೆಯ ವೇಳೆ ನಮ್ಮ ಸಂಸತ್ ಸದಸ್ಯರೊಂದಿಗೆ ನಾನು ಕೂಡ ಟಿಆರ್‌ಎಸ್ ಅನ್ನು  ಪ್ರತಿನಿಧಿಸಲಿದ್ದೇನೆ ಎಂದು ಹೇಳಿದರು.

ತೆಲಂಗಾಣ ಮುಖ್ಯಮಂತ್ರಿ ಹಾಗೂ  ಟಿಆರ್‌ಎಸ್ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಅವರು ರಾಷ್ಟ್ರಪತಿ ಚುನಾವಣೆಗೆ   ಜಂಟಿ ಕಾರ್ಯತಂತ್ರದ ಕುರಿತು ಚರ್ಚಿಸಲು ಮಮತಾ ಬ್ಯಾನರ್ಜಿ ಅವರು ಕರೆದಿದ್ದ ಪ್ರಮುಖ  ಸಭೆಯಿಂದ ಹೊರಗುಳಿದ ಎರಡು ವಾರಗಳ ನಂತರ ಈ ಘೋಷಣೆ  ಮಾಡಿದ್ದಾರೆ.

ರಾಷ್ಟ್ರಪತಿ ಚುನಾವಣೆ ಕುರಿತು ಚರ್ಚೆಗೆ ಕಾಂಗ್ರೆಸ್‌ಗೆ ಆಹ್ವಾನ ನೀಡಿದ್ದಕ್ಕೆ ಕೆಸಿಆರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಜೊತೆ ಯಾವುದೇ ವೇದಿಕೆ ಹಂಚಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕೆಸಿಆರ್ ಹೇಳಿದ್ದಾರೆ.

"ಭಾರತದ ರಾಷ್ಟ್ರಪತಿ ಚುನಾವಣೆಯಲ್ಲಿ ಯಶವಂತ್ ಸಿನ್ಹಾ ಜಿ ಅವರ ಉಮೇದುವಾರಿಕೆಗೆ ಬೆಂಬಲ ನೀಡಲು ಟಿಆರ್‌ಎಸ್  ಅಧ್ಯಕ್ಷ  ಕೆಸಿಆರ್ ನಿರ್ಧರಿಸಿದ್ದಾರೆ’’ ಎಂದು ಕೆ.ಟಿ. ರಾಮರಾವ್  ಸೋಮವಾರ ಬೆಳಗ್ಗೆ ಟ್ವೀಟಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News