ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ಖ್ಯಾತ ಪತ್ರಕರ್ತ, ಸತ್ಯಶೋಧಕ ಮುಹಮ್ಮದ್‌ ಝುಬೈರ್‌ ಬಂಧನ

Update: 2022-06-27 15:03 GMT

ಹೊಸದಿಲ್ಲಿ:  ಆಲ್ಟ್‌ ನ್ಯೂಸ್‌  ಸಹ ಸಂಸ್ಥಾಪಕ, ಪತ್ರಕರ್ತ ಮುಹಮ್ಮದ್‌ ಝುಬೈರ್‌ ರನ್ನು ʼಧಾರ್ಮಿಕ ಭಾವನೆಗಳಿಗೆ ಧಕ್ಕೆʼ ಆರೋಪದ ಮೇಲೆ ವಿಶೇಷ ತನಿಖಾ ದಳವು ಬಂಧಿಸಿದೆ ಎಂದು ತಿಳಿದು ಬಂದಿದೆ. ಈ ಕುರಿತು ಆಲ್ಟ್‌ ನ್ಯೂಸ್‌ ನ ಇನ್ನೋರ್ವ ಸಹಸಂಸ್ಥಾಪಕ ಪ್ರತೀಕ್‌ ಸಿನ್ಹಾ ಟ್ವಿಟರ್‌ ನಲ್ಲಿ ಮಾಹಿತಿ ನೀಡಿದ್ದಾರೆ.

"ಮುಹಮ್ಮದ್‌ ಝುಬೈರ್‌ ರನ್ನು ಬೇರೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕರೆಸಲಾಗಿತ್ತು. ಆದರೆ ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಬಂಧಿಸಲಾಗಿದೆ. ಈ ಕುರಿತು ಯಾವುದೇ ಸೂಚನೆ ನೀಡಿಲ್ಲ. ನಾವು ಪದೇ ಪದೇ ಮನವಿ ಮಾಡಿದರೂ ಎಫ್‌ಐಆರ್‌ ದಾಖಲಾದ ಪ್ರತಿಯನ್ನು ದಿಲ್ಲಿ ಪೊಲೀಸರು ನೀಡುತ್ತಿಲ್ಲ" ಎಂದು ಅವರು ಆರೋಪಿಸಿದ್ದಾರೆ.

"ದಾಖಲೆಯಲ್ಲಿ ಸಾಕಷ್ಟು ಸಾಕ್ಷ್ಯಾಧಾರಗಳನ್ನು ದೊರಕಿದ ನಂತರ" ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು. ಅವರನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಕಸ್ಟಡಿಗೆ ಪಡೆಯಲು ಪೊಲೀಸರು ನಾಳೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News