ಉಡುಪಿ: ಕೆಎಸ್ಸಾರ್ಟಿಸಿ ಹೊಸ ಬಸ್ ವೇಳಾಪಟ್ಟಿ

Update: 2022-06-27 15:12 GMT

ಉಡುಪಿ : ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆಎಸ್ಸಾರ್ಟಿಸಿ ನಿಗಮದ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಹಾಗೂ ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರ್ವಜನಿಕ ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾ ವ್ಯಾಪ್ತಿಯ ಸ್ಥಳಗಳಾದ ನೆಲ್ಲಿಕಟ್ಟೆ, ಹೆಬ್ರಿ, ಹೊನ್ನಾಳ, ಮಂಚಕಲ್, ಕಾರ್ಕಳ, ಕೊಕ್ಕರ್ಣೆ, ಹೆರ್ಗ, ಶಿರ್ವ-ಮಂಚಕಲ್, ಹಂಪನ್‌ಕಟ್ಟ, ಕೆಳುಸಂಕ, ಮಲ್ಪೆ ಬೀಚ್, ಪಡುಕೆರೆ, ಇತ್ಯಾದಿ ಸ್ಥಳೀಯ ವಲಯಗಳಲ್ಲಿ ಕಾರ್ಯಾಚರಣೆಯಾಗುತ್ತಿರುವ ಸಾರಿಗೆಗಳ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರು ಈ ಸಾರಿಗೆಯ ಸದುಪಯೋಗ ಪಡೆದು ಕೊಳ್ಳುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News