ಕುಂದಾಪುರ; ಬಸ್ ನಲ್ಲಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ

Update: 2022-06-27 16:53 GMT

ಕುಂದಾಪುರ: ಬೈಂದೂರು ಸಮೀಪದ ಶಿರೂರು ಎಂಬಲ್ಲಿ ಜೂ.16ರಂದು ಬಸ್ ನಲ್ಲಿ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ನಾಲ್ವರು ಆರೋಪಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಇವರನ್ನು ನ್ಯಾಯಾಲಯವು ಜುಲೈ 8  ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಚಿನ್ನಾಭರಣವನ್ನು ಮುಂಬೈಯಿಂದ ಮಂಗಳೂರಿನಲ್ಲಿ ಮಾರಾಟಕ್ಕಾಗಿ ಖಾಸಗಿ ಬಸ್‌ನಲ್ಲಿ ತರುತಿದ್ದ ವೇಳೆ ಕಳವು ಮಾಡಲಾಗಿತ್ತು. ಈ ಪ್ರಕರಣ ಆರೋಪಿಗಳಾದ ಮಧ್ಯಪ್ರದೇಶದ ಅಲಿಖಾನ್, ಅಮ್ಮದ್ ಖಾನ್, ಇಕ್ರಾರ್ ಖಾನ್, ಗೋಪಾಲ್ ಅಮ್ಲಾವಾರ್ ಎಂಬವರನ್ನು ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ನೇತೃತ್ವದ ಪೊಲೀಸರ ತಂಡ ಮಹಾರಾಷ್ಟ್ರದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದು, ಆರೋಪಿಗಳಿಂದ ಸಂಪೂರ್ಣ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News