ಮಂಗಳೂರು: ರಸ್ತೆಗೆ ಎಸೆಯಲ್ಪಟ್ಟ ಮಹಿಳೆಯ ಕೈ ಮೇಲೆ ಚಲಿಸಿದ ಲಾರಿ

Update: 2022-06-27 17:49 GMT

ಮಂಗಳೂರು : ನಗರದ ಕೆಪಿಟಿ ಜಂಕ್ಷನ್‌ನಲ್ಲಿ ಸೋಮವಾರ ಮಧ್ಯಾಹ್ನ ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಮಹಿಳೆಯೊಬ್ಬರ ಕೈ ಮೇಲೆ ಲಾರಿಯೊಂದರ ಚಕ್ರ ಹರಿದು ಗಂಭೀರ ಗಾಯಗೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಕದ್ರಿ ಸಂಚಾರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಮುಹಮ್ಮದ್ ಹನೀಫ್‌ರ ಪತ್ನಿ ಮರಿಯಮ್ಮ (೪೭) ಗಾಯಗೊಂಡವರು.

ಮುಹಮ್ಮದ್ ಹನೀಫ್ ಸೋಮವಾರ ಮಧ್ಯಾಹ್ನ 1ಕ್ಕೆ ಕೆಪಿಟಿಯ ಪೆಟ್ರೋಲ್ ಪಂಪ್‌ನಲ್ಲಿ ಬೈಕ್‌ಗೆ ಪೆಟ್ರೋಲ್ ಹಾಕಿಸಿ ವಿಟ್ಲ ಕಡೆಗೆ ಹೋಗಲು ರಾಷ್ಟ್ರೀಯ ಹೆದ್ದಾರಿ ೬೬ ಪ್ರವೇಶಿಸಿದ್ದರು ಎನ್ನಲಾಗಿದೆ. ಆವಾಗ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕೊಂದು ಹನೀಫ್‌ರ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಇದರಿಂದ ಬೈಕ್‌ನ ಹಿಂಬದಿ ಕುಳಿತಿದ್ದ ಮರಿಯಮ್ಮ  ರಸ್ತೆಗೆ ಎಸೆಯಲ್ಪಟ್ಟರು. ಅದೇ ವೇಳೆ ಕೆಪಿಟಿ ಕಡೆಯಿಂದ ನಂತೂರು ಕಡೆಗೆ ಚಲಿಸುತ್ತಿದ್ದ ಲಾರಿಯು ಮರಿಯಮ್ಮರ ಕೈಯ ಮೇಲೆ ಹರಿದು ಹೋಗಿದೆ ಎಂದು ತಿಳಿದು ಬಂದಿದೆ.

ಇದರಿಂದ ಮರಿಯಮ್ಮರಿಗೆ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News