ಉಡುಪಿ; ದ್ವಿತೀಯ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ

Update: 2022-06-28 06:08 GMT
ಸಾಂದರ್ಭಿಕ ಚಿತ್ರ

ಉಡುಪಿ, ಜೂ.28: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಎಂಬಲ್ಲಿ ಜೂ.27ರಂದು ಸಂಜೆ ವೇಳೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ಪಾರಂಪಳ್ಳಿ ನಿವಾಸಿ ಸಯ್ಯದ್‌ ಬ್ಯಾರಿ ಎಂಬವರ ಪುತ್ರಿ ಮಿಸ್ರಿಯಾ(19) ಎಂದು ಗುರುತಿಸಲಾಗಿದೆ. ಕುಂದಾಪುರ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಇವರು ವೈಯಕ್ತಿಕ ಕಾರಣಕ್ಕೆ ನೊಂದು ಮನೆಯ ಕೋಣೆಗೆ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News