ಉದ್ಧವ್ ಠಾಕ್ರೆ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಕುರಿತು ವಕೀಲರೊಂದಿಗೆ ಶಿಂಧೆ ಬಣ ಚರ್ಚೆ

Update: 2022-06-28 07:45 GMT
Photo:PTI

ಹೊಸದಿಲ್ಲಿ:ತಮ್ಮನ್ನು  ಅನರ್ಹಗೊಳಿಸುವ ನೋಟಿಸ್‌ಗೆ ಪ್ರತಿಕ್ರಿಯಿಸಲು ಜುಲೈ 12 ರವರೆಗೆ ಸುಪ್ರೀಂಕೋರ್ಟ್ ಕಾಲಾವಕಾಶ ನೀಡಿರುವ ಹಿನ್ನೆಲೆಯಲ್ಲಿ ಶಿವಸೇನೆಯ ಬಂಡುಕೋರ ಶಾಸಕರು ಉದ್ಧವ್ ಠಾಕ್ರೆ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಬಗ್ಗೆ ವಕೀಲರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ತಮ್ಮ ಮುಂದಿನ ನಡೆಯನ್ನು ಆರಂಭಿಸಲು ಅವರು ಶೀಘ್ರದಲ್ಲೇ ಮುಂಬೈಗೆ  ಹಿಂತಿರುಗಬಹುದು ಎಂದು NDTV ವರದಿ ಮಾಡಿದೆ.

ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಯ ಪಂಚತಾರಾ ಹೋಟೆಲ್‌ನಲ್ಲಿ ನೆಲೆಸಿರುವ ಏಕನಾಥ್ ಶಿಂಧೆ ನೇತೃತ್ವದ ಬಂಡುಕೋರರು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಯ ಸಾಧ್ಯತೆಯನ್ನು ಚರ್ಚಿಸಲು ವಕೀಲರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಈ ವಾರದಲ್ಲಿ ಬಹುಮತ ಸಾಬೀತುಪಡಿಸುವಂತೆ ತಿಳಿಸಬಹುದು ಎಂದು ಮೂಲಗಳು ಹೇಳಿವೆ.

ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವನ್ನು ಮುನ್ನಡೆಸುತ್ತಿರುವ ಏಕನಾಥ್ ಶಿಂಧೆ ತನಗೆ ಸುಮಾರು 50 ಶಾಸಕರ ಬೆಂಬಲವಿದೆ.  ಶಿವಸೇನೆಯ ಸುಮಾರು 40 ಶಾಸಕರ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News