ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ: ಸಂಸದ ನಾಸೀರ್ ಹುಸೇನ್ ಆರೋಪ

Update: 2022-06-28 09:53 GMT
ನಾಸೀರ್ ಹುಸೇನ್ (Photo:Twitter)

ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಬಿಜೆಪಿ ತಮ್ಮ ಪಕ್ಷದ ಶಾಸಕರನ್ನು ಬೇಟೆಯಾಡಲು ಪ್ರಯತ್ನಿಸಿದೆ ಎಂದು ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ಹೇಳಿದ್ದಾರೆಂದು India Today ವರದಿ ಮಾಡಿದೆ.

"ಕಳೆದ ಕೆಲವು ದಿನಗಳಲ್ಲಿ ನಮ್ಮ ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ. ಎನ್‌ಸಿಪಿ ಹಾಗೂ  ಸ್ವತಂತ್ರ ಶಾಸಕರನ್ನು ಸಹ ಸಂಪರ್ಕಿಸಲಾಗಿದೆ. ಆದರೆ ನಮ್ಮ ಶಾಸಕರು ನಮ್ಮ ಜೊತೆಗೆ ಇದ್ದಾರೆ" ಎಂದು ಹುಸೇನ್ ಹೇಳಿದರು.

ಮಹಾ ಅಘಾಡಿ(ಎಂವಿಎ) ಮಿತ್ರ ಪಕ್ಷವಾದ ಶಿವಸೇನೆಯ ಬಂಡಾಯ ಶಾಸಕರು ಪಕ್ಷಕ್ಕೆ ಮರಳಲಿದ್ದಾರೆ ಹಾಗೂ  ಬಿಕ್ಕಟ್ಟು ಶೀಘ್ರದಲ್ಲೇ ಬಗೆಹರಿಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

"ಇಲ್ಲಿಯವರೆಗೆ ಯಾರೂ ಅವಿಶ್ವಾಸ ನಿರ್ಣಯ ಮಂಡಿಸಿಲ್ಲ.  ರಾಜ್ಯಪಾಲರು ವಿಶ್ವಾಸಮತ ಸಾಬೀತುಪಡಿಸಲು ಸೂಚಿಸಲು ಹೇಗೆ ಸಾಧ್ಯ? ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News