ಚಾಮರಾಜನಗರ: ಕರ್ತವ್ಯ ಲೋಪ ಆರೋಪ; ಇಬ್ಬರು ಪೊಲೀಸ್ ಪೇದೆಗಳ ಅಮಾನತು

Update: 2022-06-29 16:21 GMT

ಚಾಮರಾಜನಗರ: ಕರ್ತವ್ಯಲೋಪದ ಆರೋಪದಡಿಯಲ್ಲಿ ಇಬ್ಬರು ಪೊಲೀಸ್ ಪೇದೆಗಳ ಅಮಾನತ್ತಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ನಗರದ ಡಿವೈಎಸ್ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿ.ನವೀನ್ ಹಾಗೂ ಪಟ್ಟಣ ಠಾಣೆಯ ಎಸ್.ಶಂಕರ್ ಅಮಾನತ್ತಾದ  ಪೊಲೀಸ್ ಸಿಬ್ಬಂದಿಗಳು. ಕರ್ತವ್ಯಕ್ಕೆ ಸರಿಯಾಗಿ ಬಾರದೇ, ಅತಿ ಹೆಚ್ಚಾಗಿ ಗೈರು ಹಾಜರಾಗುತ್ತಿದ್ದ ಹಿನ್ನಲೆಯಲ್ಲಿ ಹಾಗೂ ಬೇಜಾವಬ್ದಾರಿತನದ ಆರೋಪದಡಿ ಪಿ.ನವೀನ್ ಅವರನ್ನು ಅಮಾನತ್ತುಗೊಳಿಸಲಾಗಿದೆ.

ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಮಹಿಳೆಯೊಂದಿಗೆ ದುರ್ನಡತೆಯಿಂದ ನಡೆದುಕೊಂಡಿದ್ದು, ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿರುವ ಆರೋಪದಡಿ ಪಟ್ಟಣ ಠಾಣೆಯ ಸಿ.ಶಂಕರ್ ಅವರನ್ನುಅಮಾನತ್ತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News