ಸಾಕ್ಷ್ಯಾಧಾರ ಕೊರತೆ: ನಾಲ್ಕು ಪ್ರಕರಣಗಳಲ್ಲಿ ಎಂ.ಪಿ.ರೇಣುಕಾಚಾರ್ಯ ಖುಲಾಸೆ

Update: 2022-06-29 18:13 GMT

ಬೆಂಗಳೂರು, ಜೂ.29: ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ನಾಲ್ಕು ಪ್ರಕರಣಗಳಲ್ಲಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬುಧವಾರ ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

ಶಾಸಕ ರೇಣುಕಾಚಾರ್ಯ ವಿರುದ್ಧದ ಪ್ರಕರಣಗಳಲ್ಲಿ ಪೊಲೀಸರ ವಿಚಾರಣೆ ವೇಳೆ ನೀಡಿದ್ದ ಹೇಳಿಕೆ ಮತ್ತು ಕೋರ್ಟ್‍ನಲ್ಲಿ ಸಾಕ್ಷಿಗಳ ಹೇಳಿಕೆ ಹೊಂದಾಣಿಕೆಯಾಗಿಲ್ಲ. ಹೀಗಾಗಿ, ರೇಣುಕಾಚಾರ್ಯ ಸೇರಿ ಹಲವು ಬೆಂಬಲಿಗರನ್ನು ಖುಲಾಸೆಗೊಳಿಸಿ ನ್ಯಾಯಪೀಠ ಆದೇಶ ಹೊರಡಿಸಿದೆ. 

ಮರಳು ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಅಡ್ಡಿಪಡಿಸಿದ ಆರೋಪ, ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ, ಹೊನ್ನಾಳಿ ಚುನಾವಣೆ ಫಲಿತಾಂಶದ ವೇಳೆ ದಾಂಧಲೆ ಆರೋಪ, ಅಕ್ರಮವಾಗಿ ಮರಳು ತುಂಬಲು ಕರೆ ನೀಡಿದ ಆರೋಪ ಪ್ರಕರಣದಲ್ಲಿ ಎಂ.ಪಿ.ರೇಣುಕಾಚಾರ್ಯರಿಗೆ ರಿಲೀಫ್ ಸಿಕ್ಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News