​ಮಂಗಳೂರು ನಗರ, ಹೊರವಲಯದಲ್ಲಿ ಮುಂಜಾನೆಯಿಂದ ಭಾರೀ ಮಳೆ

Update: 2022-06-30 03:56 GMT

ಮಂಗಳೂರು: ನಗರ ಮತ್ತು ಹೊರವಲಯದಲ್ಲಿ ಇಂದು ಮುಂಜಾನೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ.ರಾ.ಹೆ. ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ.

ಭಾರೀ ಮಳೆಯ ಕಾರಣ ದ.ಕ. ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ನಗರದ ಪಂಪ್‌ವೆಲ್, ತೊಕ್ಕೊಟ್ಟು, ಕೊಟ್ಟಾರ ಚೌಕಿ ಮತ್ತಿತರ ಕೆಲವು ಜಂಕ್ಷನ್‌ಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲಾಗದೆ ನಿಂತಿವೆ.

ರಾ.ಹೆ.75ರ ಅಡ್ಯಾರ್ ಸಮೀಪದ ‌ಕಣ್ಣೂರು ಮತ್ತು ತೊಕ್ಕೊಟ್ಟು-ಮೆಲ್ಕಾರ್ ರಸ್ತೆಯನ್ನು ಸಂಪರ್ಕಿಸುವ ಹಲವು ಕಡೆಗಳಲ್ಲೂ ಕೂಡ ನೀರು ನಿಂತಿವೆ.

ಸ್ಮಾರ್ಟ್ ಸಿಟಿ ಯೋಜನೆಯ ಅವೈಜ್ಞಾನಿಕ‌ ಕಾಮಗಾರಿಯಿಂದಾಗಿ ನಗರದ ಹಲವು ಕಡೆಗಳಲ್ಲೂ ಇಂತಹ ದೃಶ್ಯ ಕಂಡು ಬಂದಿವೆ ಎಂದು ಸ್ಥಳೀಯರು ದೂರಿದ್ದಾರೆ. 

 ಈ ದಿನ ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಕಾರ್ಪೊರೇಷನ್‌ ವ್ಯಾಪ್ತಿಯಲ್ಲಿ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯ ನಿರ್ವಹಿಸುವುದು, ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ಸಾರಲಾಗಿದೆ. ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ದ.ಕ. ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಶಾಲೆಗೆ ಬಂದಿರುವ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಯಾ ತಾಲೂಕುಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ರಜೆ ನಿರ್ಧಾರ ಕೈಗೊಳ್ಳಲು ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News