ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಆರಾಧೆ ನೇಮಕ

Update: 2022-06-30 16:43 GMT
Photo:PTI

ಬೆಂಗಳೂರು: ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಅವರು ಜುಲೈ 2ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅಲೋಕ್  ಆರಾಧೆ ಅವರನ್ನು ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ನೇಮಕ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಆರಾಧೆ ಅವರನ್ನು ನೇಮಿಸಿರುವ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.

ನ್ಯಾಯಮೂರ್ತಿ ಆರಾಧೆ ಅವರು ಕರ್ನಾಟಕ ಹೈಕೋರ್ಟ್ ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದು, ಜುಲೈ 3ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News