ಉಡುಪಿ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ನಿಂದ ವೈದ್ಯರಿಗೆ ಸನ್ಮಾನ
ಉಡುಪಿ: ನಗರದ ವಿಎಸ್ಟಿ ರಸ್ತೆಯ ವೆಸ್ಟ್ಕೋಸ್ಟ್ ಕಟ್ಟಡದಲ್ಲಿರುವ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಉಡುಪಿ ಶೋರೂಂನಲ್ಲಿ ಶುಕ್ರವಾರ ವೈದ್ಯರ ದಿನಾಚರಣೆ ಪ್ರಯುಕ್ತ ಸಾಧಕ ವೈದ್ಯರನ್ನು ಸನ್ಮಾನಿಸಲಾಯಿತು.
ಖ್ಯಾತ ವೈದ್ಯರಾದ ಡಾ.ಕೀರ್ತನ್ ಕುಮಾರ್ ಹಾಗೂ ಡಾ.ಪ್ರಶಾಂತ್ ಕುಮಾರ್ ಶೆಟ್ಟಿ ಅವರನ್ನು ಸನ್ಮಾನಿಸಲಾ ಯಿತು. ಬಳಿಕ ಮಾತನಾಡಿದ ಡಾ.ಪ್ರಶಾಂತ್ ಕುಮಾರ್ ಶೆಟ್ಟಿ, ಆರೋಗ್ಯ ಎಂಬುದು ಪ್ರತಿಯೊಬ್ಬರಿಗೂ ಅತಿಅಗತ್ಯವಾಗಿದೆ. ಆದುದರಿಂದ ಎಲ್ಲರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸುಲ್ತಾನ್ ಸಂಸ್ಥೆಯು ವ್ಯವಹಾರದ ಜೊತೆ ಜನಸೇವೆಯಲ್ಲಿ ತೊಡಗಿರುವುದು ಕೂಡ ಶ್ಲಾಘನೀಯ ಎಂದು ಹೇಳಿದರು.
ಸಂಸ್ಥೆಯ ರೀನಲ್ ಕ್ರಾಸ್ತಾ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿದರು. ಉಡುಪಿ ಬ್ರಾಂಚ್ ಮೆನೇಜರ್ ಮುಹಮ್ಮದ್ ಅಜ್ಮಲ್ ವಂದಿಸಿದರು. ಸುಲ್ತಾನ್ ಗ್ರೂಪ್ನ ಫ್ಲೋರ್ ಮೆನೇಜರ್ ಸಿದ್ದಿಕ್ ಹಸನ್ ಕಾರ್ಯಕ್ರಮ ನಿರೂಪಿಸಿದರು.
ಸುಲ್ತಾನ್ ಗೋಲ್ಡ್ ವಾಚ್ ವಿಭಾಗದ ಮುಖ್ಯಸ್ಥ ಅಬ್ದುಲ್ ರಶೀದ್ ಮುಲ್ಕಿ, ಅಸಿಸ್ಟೆಂಟ್ ಸೇಲ್ ಮೆನೇಜರ್ಗಳಾದ ಮುಹಮ್ಮದ್ ಶಾಮೀಲ್ ಖಾದರ್, ನಝೀರ್ ಅಡ್ಡೂರು, ಸಿಬ್ಬಂದಿ ವರ್ಗದವರು ಮತ್ತು ಗ್ರಾಹಕರು ಹಾಜರಿದ್ದರು.