ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ
Update: 2022-07-01 14:41 GMT
ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನ ಗೊಳಿಸುವ ಸಲುವಾಗಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಮಣಿಪಾಲ ನಗರ ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್ ಹಾಗೂ ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ, ೨೮ ಪ್ರಕರಣ ದಾಖಲಿಸಿದ್ದು, ಒಟ್ಟು ೪,೮೦೦ ರೂ. ದಂಡ ವಸೂಲಿ ಮಾಡಲಾಯಿತು.
ಈ ಸಂದರ್ಭದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ರಾವ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಹಾಗೂ ಇತರರು ಉಪಸ್ಥಿತರಿದ್ದರು.