ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರ ಭೇಟಿ

Update: 2022-07-01 14:45 GMT

ಮಂಗಳೂರು : ನಾಡೋಜ ಕೈಯಾರ ಕಿಂಞಣ್ಣ ರೈ ಅವರ ಕುರಿತ ವಿಚಾರವನ್ನು ಶಾಲಾ ಪಠ್ಯದಿಂದ ಕೈಬಿಟ್ಟ ಬಗ್ಗೆ ಮತ್ತು ನಗರದ ಎಬಿ ಶೆಟ್ಟಿ ಸರ್ಕಲ್ ತೆರವುಗೊಳಿಸಿದ ಬಗ್ಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ತೀವ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ  ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರನ್ನು ಕಿನ್ನಿಗೋಳಿಯಲ್ಲಿರುವ ಅವರ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ ಚರ್ಚಿಸಿದರು.

ರಾಜ್ಯ ಶಿಕ್ಷಣ ಸಚಿವ ನಾಗೇಶ್ ಅವರ ಜೊತೆ ಫೋನ್ ಮೂಲಕ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರನ್ನು ನಳಿನ್ ಮಾತನಾಡಿಸಿದರು. ಅಲ್ಲದೆ ಪಠ್ಯಪುಸ್ತಕದಲ್ಲಿ ಹಿರಿಯ ಕವಿ ಕಯ್ಯಾರ ಕಿಂಞಣ್ಣ ರೈ ಅವರ ಹೆಸರನ್ನು ಹಿಂದಿನಂತೆ ಸೇರ್ಪಡೆಗೊಳಿಸುವ ಬಗ್ಗೆ ಭರವಸೆ ನೀಡಿದರು. ಅಲ್ಲದೆ ನಗರದ ಆರ್‌ಟಿಒ ಬಳಿಯಿದ್ದ ಎಬಿ ಶೆಟ್ಟಿ ಸರ್ಕಲ್‌ನ್ನು ಕೂಡ ಮತ್ತೆ ಅನುಷ್ಠಾನಗೊಳಿಸುವ ಬಗ್ಗೆಯೂ ಸಂಸದರು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News