ಶಂಕರನಾರಾಯಣ : ವಿದ್ಯಾರ್ಥಿನಿ ಆತ್ಮಹತ್ಯೆ

Update: 2022-07-01 15:40 GMT
ಮಾನಸ

ಶಂಕರನಾರಾಯಣ: ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.30ರಂದು ಶಂಕರನಾರಾಯಣ ಒಡ್ಡನಬೇರು ಎಂಬಲ್ಲಿ ನಡೆದಿದೆ.

ಮೃತರನ್ನು ಒಡ್ಡನಬೇರು ನಿವಾಸಿ ಬಾಬಣ್ಣ ಕುಲಾಲ ಎಂಬವರ ಮಗಳು ಮಾನಸ(17) ಎಂದು ಗುರುತಿಸಲಾಗಿದೆ. ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಮಾನಸ, ಎಪ್ರಿಲ್‌ನಲ್ಲಿ ನಡೆದ ಅಂತಿಮ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದರು.

ಜೂನ್ ತಿಂಗಳ ಸಪ್ಲಿಮೆಂಟರಿ ಪರೀಕ್ಷೆಗೆ ಕಟ್ಟಿದ್ದು, ಜೂ.30ರ ಫಲಿತಾಂಶದಲ್ಲಿ ತಾನು ಅನುತ್ತೀರ್ಣ ಆಗಬಹುದೆಂದು ಹೆದರಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News