ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

Update: 2022-07-01 16:51 GMT

ಮೈಸೂರು,ಜು.1: ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮಾನವೀಯತೆ ಮೆರೆದಿದ್ದಾರೆ. 

ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ ಇಂದು ಕ್ಷೇತ್ರ ಪ್ರವಾಸ ಕೈಗೊಂಡಿದ್ದರು. ಈ ವೇಳೆ ವರುಣ ಕ್ಷೇತ್ರದ ಮರಳೂರು ಗ್ರಾಮದ ಬಳಿ ರಸ್ತೆಯಲ್ಲಿ ಆಯತಪ್ಪಿ ಬೈಕ್ ನಿಂದ ಕೆಳಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದರು. ಈ ಸಮಯದಲ್ಲಿ ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ ಕಾರು ನಿಲ್ಲಿಸಿ ಮಹಿಳೆಗೆ ಧೈರ್ಯ ತುಂಬಿ ಆಸ್ಪತ್ರೆಗೆ ಕಳುಹಿಸಿದರು. 

ಈ ವೇಳೆ ಗಾಯಳುವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದ ಶಾಸಕ ಯತಿಂದ್ರ ಸಿದ್ಧರಾಮಯ್ಯ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News